ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾರ್ಕಳ : ಎಬಿವಿಪಿ ವತಿಯಿಂದ ಕಾಲೇಜಿನ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ

Posted On: 20-09-2025 09:38AM

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ವತಿಯಿಂದ ಬಿ ಎಸ್ಸಿ ನರ್ಸಿಂಗ್ ಕಾಲೇಜು ಕಾರ್ಕಳದಲ್ಲಿ ಇರುವಂತಹ ಅನೇಕ ಸಮಸ್ಯೆಗಳ ಬಗ್ಗೆ ಸಂಸ್ಥೆಯ ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು.

ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಅನುಭವಿಸುವ ಸಮಸ್ಯೆಯನ್ನು ಮನವರಿಕೆ ಮಾಡಲಾಯಿತು.

ಕಾಲೇಜಿನಲ್ಲಿ ಒಂದು ಸುಸಜ್ಜಿತ ಕಟ್ಟಡವಿಲ್ಲದೆ, ಕಾಲೇಜು ನಿರ್ವಹಣೆಗೆ ಬೇಕಾದ ಗುಮಾಸ್ತರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಇಲ್ಲದೆ, ಸರಿಯಾದ ಉಪನ್ಯಾಸಕರು ಇಲ್ಲದೆ, ಸರಿಯಾದ ತರಗತಿ ಕೊಠಡಿಗಳು ಇಲ್ಲದೆ, ಶಾಚಾಲಯಗಳ ವ್ಯೆವಸ್ಥೆಗಳು ಸರಿಯಾಗಿ ಇಲ್ಲದೆ, ನರ್ಸಿಂಗ್ ವ್ಯಾಸಂಗಕ್ಕೆ ಬೇಕಾದ ಅತ್ಯಗತ್ಯ ಉಪಕರಣಗಳು ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಸರಿಯಾದ ಪ್ರಯೋಗಾಲಯವಿಲ್ಲದೆ, ಗ್ರಂಥಾಲಯ ವ್ಯವಸ್ಥೆ ಕಾಲೇಜಿನಲ್ಲಿ ಇಲ್ಲದೆ, ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆಯನ್ನು ಎದುರಿಸುತ್ತಿದ್ದಾರೆ. ಅದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗುತ್ತಿದ್ದು ಇದಕ್ಕೆ ಸಂಬಂದಿಸಿ ಕಾಲೇಜಿನ ಆಡಳಿತ ಮಂಡಳಿ ತಕ್ಷಣವೇ ಬಂದು ಸರಿಯಾದ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಒಂದು ಉತ್ತಮವಾದ ಅವಕಾಶ ಒದಗಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿಗಳಾದ ಗಣೇಶ್ ಪೂಜಾರಿ, ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೇಯಸ್ ಅಂಚನ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.