ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಲೇಖನ ಯಜ್ಞದ ಪುಣ್ಯ ಭೂಮಿಗೆ ಚಾಲನೆ

Posted On: 25-09-2025 04:30PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿಯಲ್ಲಿ ಶರನ್ನವರಾತ್ರಿ ಮಹೋತ್ಸವದ 4 ನೇ ದಿನವಾದ ಸೆ. 25ರಂದು ಬೆಳಿಗ್ಗೆ ನವದುರ್ಗಾ ಲೇಖನ ಯಜ್ಞ ಲೇಖನ ಮಂಟಪದಲ್ಲಿ ದೇವಳದಲ್ಲಿಯೇ ನವದುರ್ಗಾ ಲೇಖನವನ್ನು ಬರೆಯಲು ಲೇಖನ ಯಜ್ಞದ ಪುಣ್ಯ ಭೂಮಿಗೆ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೊರಂಗ್ರಪಾಡಿ ಕೆ. ಪಿ ಕುಮಾರಗುರು ತಂತ್ರಿ ಮತ್ತು ಪ್ರಧಾನ ಅರ್ಚಕರಾದ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಸಮಕ್ಷಮದಲ್ಲಿ ಚಾಲನೆ ನೀಡಲಾಯಿತು.

ಕಾಪುವಿನ ಅಮ್ಮ ನೂತನ ದೇವಳದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೊದಲು ತಾತ್ಕಾಲಿಕ ಸಾನಿಧ್ಯದಲ್ಲಿ ನೆಲೆಯಾಗಿದ್ದು, ಅದೇ ಜಾಗದಲ್ಲಿ ಇದೀಗ ನವದುರ್ಗಾ ಲೇಖನ ಮಂಟಪ ರಚನೆಯಾಗಿದ್ದು, ವಿಶೇಷವಾಗಿ ಲೇಖನವನ್ನು 9 ದಿನಗಳವರೆಗೆ ಸಾನಿಧ್ಯದಲ್ಲೇ ಬರೆಯಲು ಅಥವಾ ಒಂದು ದಿನ ದೇವಳದಲ್ಲಿಯೇ ಬರೆದು ನಂತರದ ದಿನಗಳನ್ನು ಮನೆಯಲ್ಲಿ ಪೂರೈಸಿ ಲೇಖನ ಪುಸ್ತಕವನ್ನು ಶಾಶ್ವತ ಸೇವೆಯ ಸಹಿತವಾಗಿ ದೇವಳಕ್ಕೆ ಸಮರ್ಪಿಸುವ ಪುಣ್ಯಾವಕಾಶವನ್ನು ದೇವಳದ ಅಭಿವೃದ್ಧಿ ಸಮಿತಿಯಿಂದ ಒದಗಿಸಲಾಗಿದೆ.

ಈ ಸಂದರ್ಭ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ, ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗಿಶ್ ವಿ. ಶೆಟ್ಟಿ, ಧಾರ್ಮಿಕ ಸಮಿತಿಯ ಪ್ರಧಾನ ಸಂಚಾಲಕರಾದ ಭಗವಾನ್ ದಾಸ್ ಶೆಟ್ಟಿಗಾರ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಕೋಶಾಧಿಕಾರಿ ಕೆ. ವಿಶ್ವನಾಥ್, ಮಹಿಳಾ ಪ್ರಧಾನ ಸಂಚಾಲಕರಾದ ಸಾವಿತ್ರಿ ಗಣೇಶ್ ಮತ್ತು ಆರ್ಥಿಕ ಸಮಿತಿಯ ಸಂಚಾಲಕರಾದ ಸುನಿಲ್ ಎಸ್. ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.