ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಿಲ್ಲೆಯ ದಶಕದ ಕನಸು ನನಸಾಗುವ ಸಮಯ

Posted On: 24-10-2020 10:51PM

ಉಡುಪಿ ಜಿಲ್ಲಾ ಸಕಾ೯ರಿ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬ್ರಹತ್ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದು ಉಡುಪಿ ಜಿಲ್ಲೆಗೆ ವರವಾಗಿ ಪರಿಣಮಿಸಿದೆ. ಜಿಲ್ಲೆ ಯ ಜನರ ಬೇಡಿಕೆಯನ್ನು ಸಕಾ೯ರ ಈ ಮೂಲಕ ಈಡೇರಿಸಿರುವುದು ಅಭಿನಂದನೀಯವಾಗಿದೆ.ಉಡುಪಿ ಜಿಲ್ಲೆಯಾಗಿ 23 ವರ್ಷಗಳು ಕಳೆದಿದ್ದರೂ ಉಡುಪಿ ಜನತೆಯ ಬಹು ಬೇಡಿಕೆಯ ಈ ಯೋಜನೆ ಹಲವಾರು ವರ್ಷಗಳ ಕಾಲ ಕನಸಾಗಿಯೇ ಉಳಿದಿತ್ತು. ಜೆ.ಹೆಚ್ ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಉದ್ಘಾಟನೆಗೊಂಡ ಈ ಜಿಲ್ಲೆಯು, ಸರಿಯಾದ ಜಿಲ್ಲಾಸ್ಪತ್ರೆಯನ್ನು ಹೊಂದಿರಲಿಲ್ಲ ಕೇವಲ ತಾಲೂಕು ಆಸ್ಪತ್ರೆಯಾಗಿತ್ತು. ಈ ಬಗ್ಗೆ ಹಲವಾರು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೆ ಹಲವಾರು ಬಾರಿ ಜಿಲ್ಲೆಯ ಜನಪ್ರತಿನಿಧಿಗಳು ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೇವಲ ಭರವಸೆಯನ್ನು ನೀಡಿದ್ದು ಬಿಟ್ಟರೆ ಯಾವುದೇ ಕಾಯ೯ ನಡೆದಿರಲಿಲ್ಲ.ಆದರೆ ಈ ಬಾರಿ ಅದು ಕಾಯ೯ ಗತಗೊಂಡಿರುವುದು ಅತ್ಯಂತ ಸಂತೋಷದ ವಿಷಯ.

ಉಡುಪಿ ಜಿಲ್ಲಾ ಸಕಾ೯ರಿ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಉಡುಪಿಯ ಶಾಸಕ ಕೆ. ರಘುಪತಿ ಭಟ್ ಸದನದಲ್ಲಿ ಉಲ್ಲೇಖಿಸಿದ ಸಂದರ್ಭದಲ್ಲಿ ಈ ಯೋಜನೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿರಲಿಲ್ಲ. ಕಳೆದವಷ೯ ಜುಲೈ ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2020-21ನೇ ಸಾಲಿನ ಬಜೆಟ್ ಮಂಡನೆಯ ಸಂದಭ೯ ನಡೆದ ಅಧಿವೇಶನದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಶಾಸಕ ಕೆ. ರಘುಪತಿ ಭಟ್ ಎಲ್ಲರಿಗೂ ಮನದಟ್ಟಾಗುವಂತೆ ವಿಷಯವನ್ನು ಮಂಡಿಸಿ ದ ಸಂದಭ೯ ಮುಖ್ಯಮಂತ್ರಿಯವರು ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸದನದಲ್ಲಿನೀಡಿದರು.

ಇದೀಗ 115 ಕೋಟಿ ರೂ ವೆಚ್ಚದ ಆಸ್ಪತ್ರೆಯ ಕಟ್ಟಡ ನಿಮಾ೯ಣ ಮತ್ತು ಸಲಕರಣೆಗೆ ಸಚಿವ ಸಂಪುಟ ಅನುಮೋದನೆಯೊಂದಿಗೆ ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಈ ಯೋಜನೆಯನ್ನು ಕೋವಿಡ್ ನಡುವೆ ಆಥಿ೯ಕ ಪರಿಸ್ಥಿತಿಯಲ್ಲಿಯೂ ಕೈಗೆತ್ತಿಕೊಂಡಿರುವುದು ಉತ್ತಮ ಕೆಲಸ .ಅದಷ್ಟು ಬೇಗ ಈ ಆಸ್ಪತ್ರೆ ರಾಜ್ಯದಲ್ಲಿ ಮಾದರಿ ಆಸ್ಪತ್ರೆಯಾಗಿ ಪರಿಣಮಿಸಲಿ . ಇದಕ್ಕೆ ಕೈ ಜೋಡಿಸಿದ ಎಲ್ಲರಿಗೂ ಅಭಿನಂದನೆಗಳು. ✍️ ರಾಘವೇಂದ್ರ ಪ್ರಭು,ಕವಾ೯ಲು