ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನವರಾತ್ರಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಪ್ರಯುಕ್ತ ವನಮಹೋತ್ಸವ

Posted On: 24-10-2020 11:07PM

ಉಡುಪಿ: ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ನವ್ಯಚೇತನ ಟ್ರಸ್ಟಿನ ಶಾಲೆಗೆರಡು ಗಿಡ ಅಭಿಯಾನದ ಅಂಗವಾಗಿ ನವರಾತ್ರಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಪ್ರಯುಕ್ತ ಅ.23 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇಲ್ಲಿಯ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು .

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸಸಿಯನ್ನು ನೆಟ್ಟು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸುವ ಕಾರ್ಯಗಳು ಹೆಚ್ಚಾದಲ್ಲಿ ಯುವಸಮೂಹ ಸರ್ಕಾರದ ಜೊತೆಗೆ ಸೇರಿಕೊಂಡು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ಒಳ್ಳೆಯ ಬದಲಾವಣೆಯನ್ನು ತರಲು ಅನುಕೂಲವಾಗುತ್ತದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕ್ರಿಯಾಶೀಲ ಪ್ರಯತ್ನಗಳನ್ನು ನಡೆಸಬೇಕು ಎಂದರು.

ನವ್ಯಚೇತನ ಟ್ರಸ್ಟ್ ಅಧ್ಯಕ್ಷ ಡಾ. ಶಿವಾನಂದ ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಗಣೇಶ್ ಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.