ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ : ಹಿರಿಯ ಮುದ್ರಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
Posted On:
22-11-2020 01:36PM
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಇವರ ವತಿಯಿಂದ ಹಿರಿಯ ಮುದ್ರಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಶ್ರಾಂತ ಉಪಸಂಪಾದಕರು, ಉದಯವಾಣಿ ಮಣಿಪಾಲದ ನಿತ್ಯಾನಂದ ಪಡ್ರೆ ಭಾಗವಹಿಸಿದ್ದರು.
ಸನ್ಮಾನ : ದೊಡ್ಡಣಗುಡ್ಡೆಯ ವರದೇಂದ್ರ ಪ್ರಿಂಟರ್ಸ್ ಮಾಲಕರಾದ ಮಂಜುನಾಥ್ ಶೆಣೈ, ಕಾಪುವಿನ ವಿವೇಕ್ ಪ್ರಿಂಟರ್ಸ್ ಮಾಲೀಕರಾದ ವಿಠಲ ಪೂಜಾರಿ, ಕೋಟೇಶ್ವರದ ಅರುಣ ಪ್ರಿಂಟರ್ಸ್ ಮಾಲಕರಾದ ವೆಂಕಟರಮಣ ಐತಾಳ್, ಕಾರ್ಕಳದ ಸಮತಾ ಗ್ರಾಫಿಕ್ಸ್ ಮಾಲಕರಾದ ಶಿಶುಪಾಲ ಜೈನ್ ರನ್ನು ಸನ್ಮಾನಿಸಲಾಯಿತು.
ಪ್ರತಿಭಾ ಪುರಸ್ಕಾರ : ಎಸ್ಸೆಸ್ಸೆಲ್ಸಿಯಲ್ಲಿ ಶೇ.75 ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.75 ಕ್ಕಿಂತ ಮೇಲ್ಪಟ್ಟು ಅಂಕ ಬಂದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಅಧ್ಯಕ್ಷರಾದ ಎಮ್. ಮಹೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ. ಬಂಗೇರ, ಮುದ್ರಣಾಲಯಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.