ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ : ನೆರವಿನ ನಿರೀಕ್ಷೆಯಲ್ಲಿ ರಾಘವೇಂದ್ರ ಶೆಟ್ಟಿ ಕುಟುಂಬ

Posted On: 05-12-2020 09:28AM

ಇನ್ನಂಜೆ ಮಂಡೇಡಿ ಮೂಡು ಮೇಲ್ಮನೆ ಕಿಟ್ಟಿ ಶೆಟ್ಟಿಯ ಮಗನಾದ ರಾಘವೇಂದ್ರ ಶೆಟ್ಟಿ (ರಾಘು) ಕಳೆದ ಹದಿನೈದು ವರ್ಷಗಳಿಂದ ಹೊಟ್ಟೆಪಾಡಿಗಾಗಿ ಮುಂಬೈಯಲ್ಲಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದಿಂದ ತನ್ನ ಮಗುವಿನ ಅನಾರೋಗ್ಯ ಕಾರಣದಿಂದಾಗಿ ಊರಿನಲ್ಲಿ ಇದ್ದು ಮಗುವಿನ ಆರೋಗ್ಯ ಸುಧಾರಣೆಗಾಗಿ ಸುಮಾರು 5 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ಇವರ ದುರಾದೃಷ್ಟವೆಂಬಂತೆ ಈಗ ರಾಘವೇಂದ್ರ ಶೆಟ್ಟಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಅನ್ನನಾಳದಲ್ಲಿ ಗೆಡ್ಡೆಯಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು ಆರು ಲಕ್ಷದವರೆಗೆ ಖರ್ಚು ಆಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಕಾರಣದಿಂದ ಈ ಕುಟುಂಬವು ಕಂಗಾಲಾಗಿದೆ. ಒಂದೆಡೆ ಮಗುವಿನ ಚಿಕಿತ್ಸಾ ವೆಚ್ಚ ಮತ್ತೊಂದೆಡೆ ರಾಘವೇಂದ್ರ ಶೆಟ್ಟಿಯವರ ಚಿಕಿತ್ಸಾ ವೆಚ್ಚಕ್ಕೆ ಖರ್ಚು ಮಾಡಬೇಕಾಗಿದೆ.

ಸಹೃದಯಿ ದಾನಿಗಳು ಈ ಕುಟುಂಬಕ್ಕೆ ನೆರವಾಗಬೇಕೆಂದು ವಿನಂತಿಸಿದ್ದಾರೆ. ವಿಳಾಸ: ರಾಘವೇಂದ್ರ ಎಮ್. ಶೆಟ್ಟಿ S/O ಮೋನಪ್ಪ ಶೆಟ್ಟಿ ಕೆನರಾ ಬ್ಯಾಂಕ್ ಖಾತೆ ಸಂಖ್ಯೆ : 0636101016370 IFSC Code : CNRB0000636 ಶಂಕರಪುರ ಶಾಖೆ ಉಡುಪಿ ಜಿಲ್ಲೆ, ಕಾಪು ತಾಲೂಕು MOb. NO : 7715951795