ಕುತ್ಯಾರು : ಕೊನೆಗೂ ರಸ್ತೆ ಹೊಂಡಕ್ಕೆ ಸಿಕ್ಕಿತು ಮುಕ್ತಿ
Posted On:
11-12-2020 01:41PM
ಮುದರಂಗಡಿ- ಶಿರ್ವ ಮುಖ್ಯರಸ್ತೆಯ ಕುತ್ಯಾರು ಬ್ಯಾಂಕ್ ಆಫ್ ಬರೋಡ ಬಳಿ ಪೈಪ್ ಅಳವಡಿಸಲು ಅಗೆಯಲಾಗಿದ್ದ ರಸ್ತೆಯನ್ನು ಇಲಾಖೆ ಗುರುವಾರ ಸರಿಪಡಿಸಿ ಡಾಮರೀಕರಣಗೊಳಿಸಿದೆ.
ತಿರುವಿನ ರಸ್ತೆಯಲ್ಲಿ ಹೊಂಡ ಉಂಟಾಗಿ ತಿಂಗಳುಗಳೇ ಕಳೆದು ಸಣ್ಣಪುಟ್ಟ ಅಪಘಾತಗಳಾಗಿ ಜೊತೆಗೆ ಡಾಮರೀಕರಣಕ್ಕಾಗಿ ಜಲ್ಲಿ ಹಾಕಲಾಗಿದ್ದು ಪರಿಸರವಿಡೀ ಧೂಳುಮಯವಾಗಿತ್ತು.
ಇದೀಗ ಈ ರಸ್ತೆಯನ್ನು ಸರಿಪಡಿಸಿದ್ದು ಸ್ಥಳೀಯರು, ವಾಹನ ಸವಾರರು ನಿಟ್ಟುಸಿರು ಬಿಡುವಂತಾಗಿದೆ. ತಕ್ಷಣ ಸ್ಪಂದಿಸಿದ ಅಧಿಕಾರಿವರ್ಗ, ಗುತ್ತಿಗೆದಾರರಿಗೆ ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್ ಹಾಗೂ ಕುತ್ಯಾರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂಪತ್ ಕುಮಾರ್ ಕೇಂಜ ಸಾರ್ವಜನಿಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.