ಉಡುಪಿ ಬಬ್ಬರ್ಯ ದೈವಸ್ಥಾನದ ವಟಾರದಲ್ಲಿ ಅಖಿಲ ಭಾರತ ತುಳುನಾಡ ದೈವರಾದಕರ ಒಕ್ಕೂಟ ಉಡುಪಿ ಜಿಲ್ಲೆ (ರಿ.)ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸದಸ್ಯತ್ವ ಅರ್ಜಿ ಫಾರ್ಮ್ ಅನ್ನು ಒಕ್ಕೂಟದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
ಈ ಒಂದು ಸಂದರ್ಭದಲ್ಲಿ ಅಖಿಲ ಭಾರತ ದೈವರಾದಕರ ಒಕ್ಕೂಟದ ಅಧ್ಯಕ್ಷರಾದ ರವಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೋದ್ ಶೆಟ್ಟಿ, ಕೋಶಾಧಿಕಾರಿ ಶ್ರೀಧರ್ ಪೂಜಾರಿ ಬೈಕಾಡಿ, ಉಪಾಧ್ಯಕ್ಷರಾದ ಸುಧಾಕರ್ ಮಡಿವಾಳ, ನರಸಿಂಹ ಪರವ, ಯೋಗೇಶ್ ಪೂಜಾರಿ, ಅನೀಶ್ ಕೋಟ್ಯಾನ್, ಕಾರ್ಯದರ್ಶಿ ರವೀಶ್ ಕಾಮತ್, ದಯೆಶಾ ಕೋಟ್ಯಾನ್ ಹಾಗೂ ಕ್ರೀಡೆ ಕಾರ್ಯದರ್ಶಿ ಸಂತೋಷ್ ದೇವಾಡಿಗ, ಸಾಂಸ್ಕೃತಿಕ ಕಾರ್ಯದರ್ಶಿ ಅನ್ನಿ ಪ್ರಶಾಂತ್ ಪಾಣಾರ, ಗಣೇಶ್ ಪೂಜಾರಿ, ವಿಜಯ ಮಡಿವಾಳ, ಸರ್ವ ಸದಸ್ಯರು ಉಪಸ್ಥಿತರಿದ್ದರು.