ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೋಡೆಬರಹ ಪ್ರಕರಣವನ್ನು NIA ತನಿಖೆಗೆ ಆಗ್ರಹಿಸಿ ಮತ್ತು ಪೊಲೀಸ್ ಸಿಬ್ಬಂದಿ ಕೊಲೆ ಯತ್ನ ಖಂಡಿಸಿ ಡಿಸೆಂಬರ್ 23 ಕ್ಕೆ ಪ್ರತಿಭಟನೆಗೆ ಕರೆ - ವಿಶ್ವ ಹಿಂದು ಪರಿಷದ್

Posted On: 18-12-2020 08:05PM

ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹದ ಮುಖಾಂತರ ಲಷ್ಕರ್ ತೋಯಿಬಾ ಉಗ್ರ ಸಂಘಟನೆಯನ್ನು ಬೆಂಬಲಿಸಿ ಮತ್ತು ಮತ್ತು ಮುಸ್ಲಿಂ ವಿರೋಧಿಗಳನ್ನು ಹತ್ಯೆ ಮಾಡುವುದಾಗಿ ಗೋಡೆ ಬರಹದ ಮುಖಾಂತರ ಇಲ್ಲಿ ಭಯೋತ್ಫಾದಕ ಚಟುವಟಿಕೆ ಪ್ರಾರಂಭ ಮಾಡಲು ಪ್ರಯತ್ನಿಸುತ್ತಿರುವುದು ಬಹಳ ಆತಂಕಕಾರಿ ವಿಷಯವಾಗಿದೆ. ಇದರ ಹಿಂದೆ ಭಯೋತ್ಫಾದಕರ ನಂಟು ಇರುವುದು ಸಾಧ್ಯತೆ ಇದ್ದು ಈಗಾಗಲೇ 3 ಜನರನ್ನು ಬಂಧಿಸಿದ್ದು ಅವರಿಂದ ಜಾಗತಿಕ ಭಯೋತ್ಫಾದಕ ಜಮೈಕಾ ಮೂಲದ ಶೇಕ್ ಅಬ್ದುಲ್ಲಾ ಫೈಝಲ್ ಪ್ರಚೋದನಕಾರಿ ಭಾಷಣ ಮತ್ತು ಉಗ್ರರ ಅಧ್ಯಯನಕ್ಕೆ ಸಂಬಂಧಿಸಿದಂತೆ ಪುಸ್ತಕಗಳು ಸಿಕ್ಕಿರುವುದು ಬಹಳಆಘಾತಕಾರಿಯಾಗಿದೆ, ಪೊಲೀಸರು ಶೀಘ್ರವಾಗಿ ಕ್ರಮ ಕೈಗೊಂಡು ಈ ಪ್ರಕರಣವನ್ನು ಬೇಧಿಸಿದನ್ನು ಪೊಲೀಸ್ ಕಮಿಷನರ್ ಮತ್ತು ಸಿಬ್ಬಂದಿಗಳಿಗೆ ವಿಶ್ವಹಿಂದೂ ಪರಿಷತ್ ಶ್ಲಾಘಿಸುತ್ತದೆ ಮತ್ತು ಅಭಿನಂದನೆ ಸಲ್ಲಿಸುತ್ತದೆ.

ಈ ಪ್ರಕರಣವನ್ನು ಗಮನಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯೋತ್ಫಾದಕ ಚಟುವಟಿಕೆಗಳು ಬೇರೂರಿರುವ ಸಂಶಯ ವ್ಯಕ್ತವಾಗಿದ್ದು ಈಗಾಗಲೇ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದು NIA ತನಿಖೆಗೆ ಶಿಫಾರಸ್ಸು ಮಾಡಲು ವಿನಂತಿಸಿದ್ದೇವೆ. ಆಗಾಗಿ ಈ ಪ್ರಕರಣವನ್ನು ಶೀಘ್ರವಾಗಿ NIA ಯವರಿಗೆ ಹಸ್ತಾಂತರಿಸಬೇಕೆಂದು ಆಗ್ರಹಿಸಿ ಮತ್ತು ಕರ್ತವ್ಯ ನಿರತ ಪೊಲೀಸ್ ಸಿಬ್ಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಡಿಸೆಂಬರ್ 23 ಬುಧವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆಗೆ ಕರೆ ಕೊಡುತ್ತದೆ.

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಯತ್ನಕ್ಕೆ ಖಂಡನೆ - ಕಠಿಣ ಕ್ರಮ ಕೈಗೊಳ್ಳಲು ಆಗ್ರಹ -ವಿಶ್ವ ಹಿಂದು ಪರಿಷದ್ ಪೊಲೀಸ್ ಸಿಬ್ಬಂದಿಯಾದ ಗಣೇಶ್ ಕಾಮತ್ ರವರಿಗೆ ಹಾಡು ಹಗಲೇ ತಾಳುವರಿನಿಂದ ಹಲ್ಲೆ ನಡೆಸಿ ಕೊಲೆ ನಡೆಸಲು ಪ್ರಯತಿಸಿದ್ದು, ವಿಶ್ವ ಹಿಂದು ಪರಿಷದ್ ಖಂಡಿಸುತ್ತದೆ ಕಳೆದ ವರ್ಷ ಇದೆ ಸಮಯದಲ್ಲಿ NRC ಪ್ರತಿಭಟನೆ ಹೆಸರಿನಲ್ಲಿ ಪ್ರತಿಭಟನೆ ನಡೆಸುವಾಗ ಪೋಲೀಸರ ಮೇಲೆ ಕಲ್ಲು ಎಸೆತ, ಹಲ್ಲೆ ಪೊಲೀಸ್ ಸ್ಟೇಷನ್ ಗೆ ಬೆಂಕಿ ಹಚ್ಚಲು ಪ್ರಯತ್ನ ಪಟ್ಟಿದ್ದರು. ಅದೇ ಕಾರ್ಯವನ್ನು ಪುನರಾವರ್ತಿಸಲು ಗಲಭೆ ಸಂಚು ರೂಪಿಸಲು ಪ್ರಯತ್ನಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು, ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್ ಈ ಸಂಧರ್ಭದಲ್ಲಿ ಉಪಸ್ಥಿತಿ ಇದ್ದರು.