ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಂದನ ಸಹಾಯಕ್ಕಾಗಿ ವೇಷಧರಿಸಿದ ಮಹಾಗಣಪತಿ ಸೇವಾ ಟ್ರಸ್ಟ್ ಸದಸ್ಯರು

Posted On: 22-12-2020 02:43PM

ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿರುವ ಅಡ್ಯಾರ್ ಪದವಿನ ಸುರೇಶ್ ಹಾಗೂ ಅಂಬಿಕಾ ದಂಪತಿಯ 4 ವರ್ಷದ ಪುಟ್ಟ ಕಂದ ದರ್ಶನ್ ನ ಚಿಕಿತ್ಸೆಗೆ ಸರಿಸುಮಾರು ಹದಿನೈದು ಲಕ್ಷ ರೂಪಾಯಿಯ ಅಗತ್ಯವಿದ್ದು ದಂಪತಿಯ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿರುವುದು.

ಸಂತ್ರಸ್ತರ ಅಳಲನ್ನು ಮನಗಂಡು ಮಹಾಗಣಪತಿ ಸೇವಾ ಟ್ರಸ್ಟ್ ನ ಸದಸ್ಯರು ಶಿಬರೂರು ಜಾತ್ರೆಯಲ್ಲಿ ಉರಿ ಬಿಸಿಲಿನ ಬೇಗೆಯ ನಡುವೆಯೂ ಮಹಿಷಾಸುರನ ವೇಷಧರಿಸಿ ದಾನಿಗಳಿಂದ ಸಹಾಯಹಸ್ತವನ್ನು ಚಾಚಿದರು. ಇವರ ಈ ಸೇವಾ ಕಾರ್ಯ ಇತರರಿಗೂ ಮಾದರಿ.