ದೇರಳಕಟ್ಟೆ ಸೇವಾಶ್ರಮದಲ್ಲಿ ವೃದ್ಧರೊಂದಿಗೆ ನಗು ನಲಿವು, ಆರೋಗ್ಯ ಮಾಹಿತಿ ಶಿಬಿರ
Posted On:
05-01-2021 07:20PM
ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ) ಬಾಳ್ತಿಲ ಮತ್ತು ಸೇವಾಶ್ರಮ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು.
ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮ ಮಗುವಂತೆ ಪ್ರೀತಿಸಿ ಎಂದು ಹೇಳಿದರು.
ಆಶ್ರಮವಾಸಿಗಳಿಗೆ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.