ತೊಕ್ಕೊಟ್ಟು ಒಳಪೇಟೆ ಮೀನುಮಾರುಕಟ್ಟೆ ಹತ್ತಿರ ರೈಲ್ವೆಗೆ ಸೇರಿದ ಸ್ಥಳದಲ್ಲಿ ಅಕ್ರಮವಾಗಿ ದನದ ಮಾಂಸದ ಸ್ಟಾಲ್ ತೆರೆದಿದ್ದು,ಇದರ ವಿರುದ್ಧ ಉಳ್ಳಾಲ ನಗರಸಭೆಯ ಅಧ್ಯಕ್ಷರಿಗೆ, ಪೌರಾಯುಕ್ತರಿಗೆ ಹಾಗೂ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ರವರಿಗೆ ವಿಶ್ವ ಹಿಂದು ಪರಿಷತ್ ಬಜರಂಗದಳದ ಉಳ್ಳಾಲ ನಗರ ಪ್ರಖಂಡ ವತಿಯಿಂದ ಮನವಿ ಸಲ್ಲಿಸಲಾಯಿತು.
ಉಳ್ಳಾಲ ನಗರ ಪ್ರಖಂಡದ ಸಂಚಾಲಕ್ ಅರ್ಜುನ್ ಮಾಡೂರು ಜಿಲ್ಲಾ ಸಹಗೋರಕ್ಷ ಪ್ರಮುಖ್ ಪವಿತ್ರ್ ಕೆರೆಬೈಲ್,ಪ್ರಖಂಡ ಗೋರಕ್ಷ ಪ್ರಮುಖ್ ರಕ್ಷಿತ್ ತೊಕ್ಕೊಟ್ಟು, ಸಾಪ್ತಾಹಿಕ ಪ್ರಮುಖ್ ಕೌಶಿಕ್ ಉಳ್ಳಾಲ ಬೈಲ್ ಉಪಸ್ಥಿತರಿದ್ದರು.