ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ನಾಟಕ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರಾದ ಭಾಸ್ಕರ್ ಮಣಿಪಾಲ

Posted On: 11-01-2021 06:00PM

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ನೀಡುವ 2019 - 20ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಯನ್ನು ರಂಗನಟ, ಹಲವಾರು ಕಿರುಚಿತ್ರ, ಚಲನಚಿತ್ರಗಳಲ್ಲಿ ನಟಿಸಿರುವ ಭಾಸ್ಕರ್ ಮಣಿಪಾಲ ಅವರಿಗೆ ತುಮಕೂರು ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಪ್ರದಾನ ಮಾಡಲಾಯಿತು.

ತುಮಕೂರಿನ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಮನ್ನಿರಂಜನ ಪ್ರಣವಸ್ವರೂಪಿ ಸಿದ್ದಗಂಗಾ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಪ್ರೊ. ಭೀಮಸೇನ ಆರ್, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಬಿ. ಜ್ಯೋತಿ ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್. ರಂಗಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.