ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾ.ಪಂಚಾಯತಿಯಲ್ಲಿ ಜಲಜೀವನ್ ಮಿಷನ್ ಕಾರ್ಯಚಟುವಟಿಕೆಯಡಿ ಸಮುದಾಯ ಸಂಸ್ಥೆ ವತಿಯಿಂದ ಗ್ರಾಮೀಣ ಸಹಭಾಗಿತ್ವ ಕಾರ್ಯಕ್ರಮ ನಡೆಸಲಾಯಿತು.
ಜೆಜೆಎಮ್ ಐಇಸಿ/ಹೆಚ್.ಆರ್.ಡಿ ಜಿಲ್ಲಾ ಮುಖ್ಯಸ್ಥ ಶಿವರಾಮ ಪಿ.ಬಿ ಗ್ರಾಮ ಕ್ರಿಯಾ ಯೋಜನೆ ಮತ್ತು ಪಿ.ಆರ್.ಎ ಕುರಿತು ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮಸ್ಥರ ಸಹಕಾರದಲ್ಲಿ ನಕ್ಷೆ ಬಿಡಿಸಿ ಗ್ರಾಮದ ಸಂಪೂರ್ಣ ಚಿತ್ರಣ ಬಿತ್ತರಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ,ನೂತನ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಜೆಜೆಎಮ್ ಸಿಬ್ಬಂದಿಗಳಾದ ಚರಣ್ ರಾಜ್,ಫಲಹಾರೇಶ್, ಮಹಾಂತೇಶ್, ರಘುಚಂದ್ರ ಶೆಟ್ಟಿ,ಸದಾಶಿವ,ಈಶ್ವರ್ ಅವರು ಸಹಕರಿಸಿದರು.