ಹಲವು ದಿನಗಳಿಂದ ಕಳ್ಳರ ಕಾಟ ಉಡುಪಿಯಲ್ಲಿ ಹೆಚ್ಚಾಗುತ್ತಿದ್ದು, ಉಡುಪಿ ಜಿಲ್ಲೆಯ ಕಾಪು ತಾಲೂಕಿನ 92 ಹೇರೂರು ಗ್ರಾಮದಲ್ಲಿ ಕಳ್ಳರ ಕಾಟ ಹೆಚ್ಚಾಗಿದ್ದು, ರಾತ್ರಿ ವಿದ್ಯುತ್ ಕಡಿತಗೊಂಡಾಗ, ನಾಯಿಗಳ ಬೊಗಳುವಿಕೆ ಜಾಸ್ತಿ ಆಗುತ್ತೆ, ಇದೆ ಹೊತ್ತಿನಲ್ಲಿ ಕಳ್ಳರು ಈ ಪರಿಸರದಲ್ಲಿ ತಿರುಗಾಡುವುದರ ಬಗ್ಗೆ ಹಲವರ ಅನಿಸಿಕೆಯಾಗಿದೆ.
ಈ ಬಗ್ಗೆ ಊರಿನ ಜನಪ್ರತಿನಿಧಿಗಳಿಗೆ ಗೊತ್ತಿದ್ದರು ಸುಮ್ಮನಿರುವುದು ಗ್ರಾಮಸ್ಥರಿಗೆ ಬೇಸರದ ವಿಷಯ.
ಈ ಕಳ್ಳರ ಕಾಟಕ್ಕೆ ಗ್ರಾಮಸ್ಥರೆ ಎಚೆತ್ತುಕೊಳ್ಳ ಬೇಕೇ? ಎಂದು ಸ್ಥಳೀಯರಾದ ಜಗದೀಶ್ ಬಂಟಕಲ್ಲ್ ಪ್ರಶ್ನಿಸಿದ್ದಾರೆ.