ಕಾಪು ತಾಲೂಕಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಟ್ಟಡದ ಸುವರ್ಣ ಮಹೋತ್ಸವದ ಪ್ರಯುಕ್ತ ಭಜನಾ ಮಂಗಳೋತ್ಸವವು ಜನವರಿ 31ರಂದು ದೇವಸ್ಥಾನದಲ್ಲಿ ನಡೆಯಲಿದೆ.
ಬಳಿಕ ರಾತ್ರಿ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಆನೆಗುಂದಿ ಮಠಾಧೀಶರಾದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.