ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿಯ ಕೋಟೆ, ಕಂಬೆರ್ಕಳ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಇಂದು ಮತ್ತು ನಾಳೆ ಸಿರಿ ಸಿಂಗಾರದ ನೇಮೋತ್ಸವ

Posted On: 30-01-2021 02:32PM

ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಪುರಾತನ ಕಟಪಾಡಿಯ ಕೋಟೆ, ಕಂಬೆರ್ಕಳ ಬಬ್ಬುಸ್ವಾಮಿ ದೈವಸ್ಥಾನದ ಪ್ರಸಕ್ತ ಸಾಲಿನ ನೇಮೋತ್ಸವವು ಇಂದು ಮತ್ತು ನಾಳೆ ಜರಗಲಿದೆ.

ಇಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಗಜಕಂಬ ಮುಹೂರ್ತ, ಮಧ್ಯಾಹ್ನ 12ಕ್ಕೆ ಚಪ್ಪರ ಮುಹೂರ್ತ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ 5ಕ್ಕೆ ಭಂಡಾರ ಇಳಿಯುವುದು, ರಾತ್ರಿ 9ರಿಂದ ದೈವರಾಜ ಶ್ರೀ ಬಬ್ಬುಸ್ವಾಮಿ ದೈವದ ನೇಮೋತ್ಸವ, ರಾತ್ರಿ ಗಂಟೆ 12ರಿಂದ ಆದಿಶಕ್ತಿ ಸ್ವರೂಪಿಣಿ ಶ್ರೀ ತನ್ನಿಮಾನಿಗ ದೇವಿಯ ನೆಲೆ.

ನಾಳೆ ಬೆಳಿಗ್ಗೆ 10ರಿಂದ ಶ್ರೀ ಧೂಮಾವತಿ ಬಂಟ ದೈವದ ನೇಮೋತ್ಸವ, ಮಧ್ಯಾಹ್ನ 3ರಿಂದ ಜೋಡು ಗುಳಿಗ ನೇಮೋತ್ಸವ, ಸಂಜೆ 6 ರಿಂದ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವವು ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.