ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಲ್ಲಾರುಗುತ್ತು ಶ್ರೀ ಸುಬ್ರಹ್ಮಣ್ಯ ಶೆಟ್ಟಿ ನಿಧನ

Posted On: 30-01-2021 10:00PM

ಕಾಪು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಭಾಸ್ಕರ್ ಶೆಟ್ಟಿಯವರ ಸುಪುತ್ರ, ಕಾಪು ಪುರಸಭೆಯ ಸದಸ್ಯೆ ಶ್ರೀಮತಿ. ಶಾಂತಲತಾ ಎಸ್. ಶೆಟ್ಟಿ ಯವರ ಪತಿ ಮಲ್ಲಾರುಗುತ್ತು ಶ್ರೀ ಸುಬ್ರಹ್ಮಣ್ಯ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಲ್ಲಾರಿನ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದರು.

ಮೃತರ ಅಂತ್ಯಕ್ರಿಯೆ ಇಂದು ರಾತ್ರಿ 9.00 ಗಂಟೆಗೆ ಮಲ್ಲಾರುಗುತ್ತುವಿನ ಸ್ವಗೃಹದಲ್ಲಿ ನಡೆಯಲಿದೆ.