ಕ್ರೀಡೆಯಲ್ಲಿ ಭಾಗವಹಿಸುವುದರಿಂದ ರೋಟರಿ ಸದಸ್ಯರ ಬಾಂಧವ್ಯ ವೃದ್ಧಿಗೆ ಸಹಕಾರಿ: ಡಾ| ಭರತೇಶ್ ಆದಿರಾಜ್
Posted On:
05-02-2021 11:29AM
ರೋಟರಿ ವಲಯ ೫ರ ಕ್ರೀಡಾಕೂಟ ಗೊಬ್ಬು ಗಮ್ಮತ್ತ್ ಬೆಳ್ಮಣ್ ರೋಟರಿಯ ಆತಿಥ್ಯದಲ್ಲಿ ಬೆಳ್ಮಣ್ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿದ್ದು ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಅವಿಭಜಿತ ರೋಟರಿ ಜಿಲ್ಲೆ ೩೧೮೨ರ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ| ಭರತೇಶ್ ಆದಿರಾಜ್ ಕ್ರೀಡಾಕೂಟ ಉದ್ಘಾಟಿಸಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ರಿಂದ ರೋಟರಿ ಸದಸ್ಯರ ಬಾಂಧವ್ಯ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ನುಡಿಯುತ್ತ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಮಾಡ ರೋಟರಿ ಬೆಳ್ಮಣ್ಣಿನ ಕಾಯಕಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಲಯ ೫ರ ಸಾಹಯಕ ಗವರ್ನರ್ ರೋ| ನವೀನ್ ಅಮಿನ್ ಕ್ರೀಡಾಕೂಟದ ನಿಯಮಗಳ ಬಗ್ಗೆ ವಿವರಿಸಿದರು.
ವಲಯ ಸೇನಾನಿ ರೋ| ಸುರೇಶ್ ರಾವ್ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಸ್ಪೂರ್ತಿಯ ಬಗ್ಗೆ ಮಾರ್ಮಿಕವಾಗಿ ನುಡಿದರು. ವಲಯ ೫ರ ಕ್ರೀಡಾ ಸಂಯೋಜಕ ರೋ| ದೇವೇಂದ್ರ ಶೆಟ್ಟಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿ, ಕ್ರೀಡಾಕೂಟದ ಊಟೋಪಚಾರದ ಸಂಪೂರ್ಣ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಬೆಳ್ಮಣ್ಣಿನ ಅಧ್ಯಕ್ಷ ರೋ| ಶುಭಾಷ್ ಕುಮಾರ್ ವಹಿಸಿ ಎಲ್ಲರನ್ನೂ ಸ್ವಾಗತಿಸಿದರು. ರೋ| ವಿಘ್ನೇಶ್ ಶೆಣೈ ಕಾರ್ಯಕ್ರಮ ನಿರೂಪಿಸಿ, ಸಂಸ್ಥೆಯ ಕಾರ್ಯದರ್ಶಿ ರೋ| ರವಿರಾಜ್ ಶೆಟ್ಟಿ ವಂದಿಸಿದರು.