ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುಂಜೂರು : ಶ್ರೀದುರ್ಗಾಮಾತೆಯ ಸನ್ನಿಧಿಯಲ್ಲಿ ತ್ರಿಕಾಲ ಪೂಜೆ, ಅನ್ನಸಂತರ್ಪಣೆ

Posted On: 27-02-2021 02:05PM

ಕಾಪು ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ಕುಂಜೂರು ಇವರ ಮುಂದಾಳತ್ವದಲ್ಲಿ ಮಾರ್ಚ್ 1, ಸೋಮವಾರದಂದು ಶ್ರೀದುರ್ಗಾಮಾತೆಯ ಸನ್ನಿಧಿಯಲ್ಲಿ ದಿನದ ತ್ರಿಸಂಧ್ಯಾ ಕಾಲಗಳಲ್ಲಿ ಶ್ರೀ ದುರ್ಗಾಮಾತೆಗೆ ವಿಸ್ತೃತ ವಿಧಿ-ವಿಧಾನ, ಅರ್ಚನೆ-ಪಾರಾಯಣ, ವಿಶೇಷ ಸಮರ್ಪಣೆ, ಬಾಗಿನದಾನ-ಕನ್ನಿಕಾ ಪೂಜೆ, ಅನ್ನಸಂತರ್ಪಣೆ ಮುಂತಾದ ವಿವಿಧ ಉಪಾಸನಾ ಅನುಷ್ಠಾನಗಳೊಂದಿಗೆ ನೆರವೇರುವ ಆರಾಧನೆಯಾದ ತ್ರಿಕಾಲ ಪೂಜೆ ನಡೆಯಲಿದೆ. ಅದೇ ರೀತಿ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.