ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಲಯನ್ಸ್ ಕ್ಲಬ್ ವತಿಯಿಂದ ಸ್ವಾಗತ, ಸಂದೇಶ ಸಾರುವ ಫಲಕ

Posted On: 09-03-2021 10:35PM

ಕಾಪು : ಕಾಪು ಲಯನ್ಸ್ ಕ್ಲಬ್ ವತಿಯಿಂದ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪಾಂಗಳ ಸೇತುವೆ ಹತ್ತಿರ ಬೀಚ್ ಸಿಟಿ ಕಾಪುವಿಗೆ ಪುರಸಭಾ ವ್ಯಾಪ್ತಿಗೆ ಸ್ವಾಗತ ಹಾಗೂ ರಸ್ತೆ ಮೇಲೆ ಕಸ ಹಾಕಬೇಡಿ ಎಂಬ ಸಂದೇಶ ಸಾರುವ ಫಲಕ ಲಯನ್ಸ್ ನ ಜಿಲ್ಲಾ ಗವರ್ನರ್ ಯನ್.ಎಮ್. ಹೆಗ್ಡೆ ಹಾಗೂ ಕಾಪು ಪುರಸಭಾ ಅಧಕ್ಷ ರಾದ ಅನಿಲ್ ಕುಮಾರ್ ರವರು ಜಂಟಿಯಾಗಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ರವರು ಕಾಪುವಿಗೆ ಸ್ವಾಗತ ಕೋರುವ ಈ ಫಲಕ ಒಂದು ಒಳ್ಳೆಯ ಸಂದೇಶ ಸಾರುವ ಫಲಕವಾಗಿದು ಮುಂದಿನ ದಿನಗಳಲ್ಲಿ ಪುರಸಭೆಯಿಂದ ಇನ್ನಷ್ಟು ಫಲಕಗಳು ಅಳವಡಿಸಲಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಪು ಠಾಣೆಯ ಎ.ಯಸ್.ಐ ಜಯ ಪ್ರಕಾಶ್ ,ಮಾಜಿ ಜಿಲ್ಲಾ ಗವರ್ನರ್ ಸುರೇಶ್ ಶೆಟ್ಟಿ , ಕಾಪು ಲಯನ್ಸ್ ನ ಅಧ್ಯಕ್ಷ ವರುಣ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಸಂಯೋಜಕ ರಾದ ವಿ. ಟಿ ಹೆಗ್ಡೆ, ಜಯಕುಮಾರ್, ನಡಿಕೆರೆ ರತ್ನಾಕರ ಶೆಟ್ಟಿ, ಕೆ. ಯಂ. ಲುತುಫುಲ್ಲ, ನಾಗರಾಜ್ ರಾವ್ ,ಕಾಪು ಲಯನ್ಸ್ ನ ಪಿ ಆರ್ ಓ ಹರೀಶ್ ನಾಯಕ್ ಕಾಪು ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.