ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎಲ್ಲೂರು : ಮಹಾ ಶಿವರಾತ್ರಿಯ ಪ್ರಯುಕ್ತ ನಿರಂತರ ಭಜನೆ

Posted On: 11-03-2021 02:55PM

ಎಲ್ಲೂರು ,ಮಾ.11: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ 'ಮಹಾ ಶಿವರಾತ್ರಿ'ಯ ಪ್ರಯುಕ್ತ ವಿವಿಧ ಆಹ್ವಾನಿತ ತಂಡಗಳಿಂದ ನಿರಂತರ ಭಜನಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಶ್ರೀ ವಿಶ್ವೇಶ್ವರ ದೇವಸ್ಥಾನ ಎಲ್ಲೂರು ಹಾಗೂ ಎಲ್ಲೂರು ಯುವಕ ಮಂಡಲ(ರಿ) ಜಂಟಿಯಾಗಿ ಹಮ್ಮಿಕೊಂಡಿದ್ದು ದೇವಳದ ಪವಿತ್ರಪಾಣಿ ಕೆ.ಎಲ್.ಕುಂಡಂತಾಯ ಮತ್ತು ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ ಅವರು ಉದ್ಘಾಟಿಸಿದರು.

ಪಂ.ಸದಸ್ಯ ವೈ.ರವಿರಾಜ್, ವಿಶ್ವೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯರಾದ ವೈ.ಸೀತಾರಾಮ ರಾವ್ ಹಾಗೂ ರಾಮಚಂದ್ರ ರಾವ್ , ನರಸಿಂಹ ಜೆನ್ನಿ , ಯುವಕ ಮಂಡಲದ ಅಧ್ಯಕ್ಷ ನಾಗೇಶ ಕೊಡಂಗೆ ಹಾಗೂ ಸದಸ್ಯರು ಭಾಗವಹಿಸಿದ್ದರು. ಪರಿಸರದ ಭಜನಾ ಮಂಡಳಿಗಳು ನಿರಂತರ ಭಜನೆಯಲ್ಲಿ ಪಾಲ್ಗೊಂಡವು.