ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕ ಯುವತಿಯನ್ನು ಸುರತ್ಕಲ್ ಬಳಿ ಬಜರಂಗದಳದ ಕಾರ್ಯಕರ್ತರು ಪೋಲಿಸರಿಗೆ ಒಪ್ಪಿಸಿದ ಘಟನೆ ನಿನ್ನೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಈ ಜೋಡಿಯನ್ನು ಪೋಲಿಸರಿಗೆ ಒಪ್ಪಿಸಿ ಮಾತನಾಡಿದ ಬಜರಂಗದಳ ಪ್ರಮುಖರು ಲವ್ ಜಿಹಾದ್ ನಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಾದರೆ ನೇರವಾಗಿ ಕಾರ್ಯಾಚರಣೆಗೆ ಇಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.